ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಐವರ್ನಾಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಂಗಮಲೆ ಖಾಲಿ ಸ್ಥಳದಲ್ಲಿ ತ್ಯಾಜ್ಯ ಎಸೆದ ನಿವಾಸಿಗೆ ಗ್ರಾಮ ಪಂಚಾಯತಿ ವತಿಯಿಂದ ₹5,000 ದಂಡ ವಿಧಿಸಿ, ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಬಾರದು ಎಂದು ಎಚ್ಚರಿಕೆ ನೀಡಲಾಯಿತು.
1/2
@eshwar_khandre
@PriyankKharge@kharge ನೀವು ಗೃಹಮಂತ್ರಿಗಳಾಗುತ್ತಿರುವುದು ಅತ್ಯಂತ ಸಂತಸ ತಂದಿದೆ. ಇಲಾಖೆಯಲ್ಲಿ ಅನೇಕ ಬದಲಾವಣೆ ಮಾಡಬೇಕಿದ್ದು ತಾವು ಸಮರ್ಥರು ಎಂಬ ನಂಬಿಕೆ ನಮಗಿದೆ. PSI ಗಳ ಅಂತರ್ ವಲಯ ವರ್ಗಾವಣೆಯನ್ನು 2022 ರಿಂದ ನಿಲ್ಲಿಸಿದ್ದು ತಾವುಗಳು ಇದಕ್ಕೆ ಪರಿಹಾರ ನೀಡುತ್ತೀರಿ ಎಂಬ ಭರವಸೆ ಇದೆ ಸರ್.
ಕರ್ನಾಟಕದ ಮುಖ್ಯಮಂತ್ರಿಯಾಗಿ ಅತ್ಯಂತ ಸುದೀರ್ಘಾವಧಿ ಸೇವೆ ಸಲ್ಲಿಸಿದ ದಾಖಲೆಯೊಂದಿಗೆ, ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು, ಸೈದ್ಧಾಂತಿಕ ನಿಲುವುಗಳು, ರಾಜಕೀಯ ಹೋರಾಟಗಳಿಂದ ರಾಜ್ಯದ ಜನತೆಯ ಪ್ರೀತಿಗೆ ಪಾತ್ರರಾದವರು ಶ್ರೀ ಸಿದ್ದರಾಮಯ್ಯ ಅವರು.
ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಸಂವಿಧಾನದ ಮೌಲ್ಯಗಳು, ಜಾತ್ಯತೀತ ಹಾಗೂ ಸಮಾಜವಾದಿ ತತ್ವಗಳಿಗೆ ಬದ್ಧರಾಗಿ, ಪ್ರಬುದ್ಧ ರಾಜಕಾರಣಕ್ಕೆ ಮೇಲ್ಪಂಕ್ತಿ ಹಾಕಿದರು. ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸ್ಫೂರ್ತಿ ಅವರು.
ನನ್ನ ವೈಯಕ್ತಿಕ ರಾಜಕೀಯ ಬದುಕಿನಲ್ಲಿ, ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಅವರ ಮಾರ್ಗದರ್ಶನ ಬಹುಮುಖ್ಯ ಪಾತ್ರವಹಿಸಿದೆ. ಐಟಿ, ಬಿಟಿ ಮತ್ತು ಪ್ರವಾಸೋದ್ಯಮದಂತಹ ಮಹತ್ವದ ಖಾತೆಗಳ ಜವಾಬ್ದಾರಿ ವೇಳೆ, ಸಂಪುಟದಲ್ಲಿನ ಅತಿ ಕಿರಿಯ ಸಚಿವ ಎಂಬ ಹಿಂಜರಿಕೆ ಉಂಟಾಗದಂತೆ ನನ್ನಲ್ಲಿ ಆತ್ಮವಿಶ್ವಾಸ ತುಂಬುವ ಜೊತೆಗೆ, ಜನಪರ ಯೋಜನೆಗಳನ್ನು ರೂಪಿಸಲು ಸ್ವಾತಂತ್ರ್ಯ ನೀಡಿದರು. ಪ್ರಸಕ್ತ ಅವಧಿಯಲ್ಲಿಯೂ ಎರಡು ಪ್ರಮುಖ ಖಾತೆಗಳ ಜವಾಬ್ದಾರಿಯುತ ಹೊಣೆಗಾರಿಕೆಯಲ್ಲಿ ಅವರ ಮಾರ್ಗದರ್ಶನ ಮೌಲ್ಯಯುತವಾಗಿತ್ತು.
ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರಮುಕ್ತ ಆಡಳಿತ, ಅಭಿವೃದ್ಧಿಪರ ಕೆಲಸಗಳನ್ನು ಮಾಡಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಶಕ್ತಿ ತುಂಬಿವೆ. ಇಂತಹ ಮುತ್ಸದ್ಧಿ ನಾಯಕರ ಸಂಪುಟದಲ್ಲಿ ಸಚಿವ ಸ್ಥಾನ ನಿಭಾಯಿಸಿರುವುದು ನನಗೆ ಹೆಮ್ಮೆಯ ಸಂಗತಿ.
ಶ್ರೀ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿರುವುದು ನಮ್ಮೆಲ್ಲರಿಗೂ ಭಾವುಕ ಸಂಗತಿ. ತಮ್ಮ ಮೌಲ್ಯಗಳಿಗೆ ಕಟಿಬದ್ಧರಾಗಿ, ಸಮಾಜಮುಖಿ ಕಾರ್ಯಗಳಿಂದ ಜನರಿಗೆ ಹತ್ತಿರವಾಗಿದ್ದ ಶ್ರೀ ಸಿದ್ದರಾಮಯ್ಯ ಅವರ ಕೊಡುಗೆಗಳನ್ನು ನೆನೆಯೋಣ. ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಮೂಲಕ, ಕೋಮುವಾದಿ ಶಕ್ತಿಗಳಿಂದ ರಾಜ್ಯವನ್ನು ರಕ್ಷಿಸೋಣ.
ಸಿದ್ದರಾಮನಹುಂಡಿಯಿಂದ ವಿಧಾನಸೌಧದ ವರಿಗೆ ಅವರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ.
@siddaramaiah
@ChekrishnaCk ಅಖಿಲ ಭಾರತ ನಾಟಕ ಸ್ಪರ್ಧೆ ನಡೆಯುತ್ತಿದೆ. ಇದು ಎಲ್ಲಾ ವರ್ಗದವರಿಗೆ
ರಾಜಕಾರಣಿಗಳು
ಅಧಿಕಾರಿಗಳು
ಕಾರ್ಯಕರ್ತರು
ಹಾಗೂ ಮೂರ್ಖರಿಗೆ ಕೂಡ.
ಮೊದಲು ಬಂದವರಿಗೆ BJP ಇಂದ ticket confirm