ದಿ:10.09.2025 ರಂದು ಪ್ರಸ್ತುತ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿಕಟಪೂರ್ವ ಜಿಲ್ಲಾಧಿಕಾರಿಗಳಾದ ಶ್ರೀ ಎಂ.ಎಸ್. ದಿವಾಕರ I.A.S. ರವರನ್ನು ಹೃದಯಪೂರ್ವಕ ಬೀಳ್ಕೊಡುಗೆ ಹಾಗೂ ನೂತನವಾಗಿ ಜಿಲ್ಲಾಧಿಕಾರಿ ಹುದ್ದೆಗೆ ಪ್ರಭಾರೆ ವಹಿಸಿಕೊಂಡಿರುವ ಶ್ರೀಮತಿ ಕವಿತ ಎಸ್ ಮನ್ನಿಕೇರಿ I.A.S. ರವರ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿರುತ್ತದೆ
ದಿ:10.09.2025 ರಂದು ಮಾನ್ಯ ACS ಹಾಗೂ ಅಭಿವೃಧ್ದಿ ಆಯುಕ್ತರು, ಅಧ್ಯಕ್ಷರು KMERC ರವರ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆಯ CEPMIZ ಯೋಜನೆಗಳ ಅಡಿಯಲ್ಲಿ ಅನುಮೋದನೆಗೊಂಡಿರುವ DPR ಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಭಾಗವಹಿಸಿದರು
ಇಂದು ದಿನಾಂಕ:10.09.2025 ರಂದು ಶ್ರೀಮತಿ ಕವಿತಾ ಎಸ್ ಮನ್ನಿಕೇರಿ I.A.S. ಇವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ವಿಜಯನಗರ ಜಿಲ್ಲೆ ಹುದ್ದೆಗೆ ವರದಿ ಮಾಡಿಕೊಂಡಿರುತ್ತಾರೆ.
ಮಾನ್ಯ ಪ್ರ��ಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಸರ್ಕಾರಿ ಜಮೀನುಗಳನ್ನು ಕೆ.ಐ.ಡಿ.ಬಿ ಇವರಿಗೆ ಕೈಗಾರಿಕಾ ಉದ್ದೇಶಕ್ಕಾಗಿ ಹಸ್ತಾಂತರಿಸುವ ಸಂಬಂಧ ನಡೆದ ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಭಾಗವಹಿಸಿದರು.
ದಿ:09.09.225 ರಂದು ಮಾನ್ಯ DCರವರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಾಗೂ MDRS ವಸತಿ ಶಾಲೆಗಳ ವಾರ್ಡನ್ ಹಾಗೂ ಪ್ರಾಂಶುಪಾಲರೊಂದಿಗೆ MDRSಗಳ ನಿರ್ವಹಣೆ ಸಂಬಂಧ ಸಭೆ ನಡೆಸಿದರು
ದಿನಾಂಕ:09.09.2025 ರಂದು ಮಾನ್ಯ ಜಿಲ���ಲಾಧಿಕಾರಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿ ಸಭೆ ನಡೆಸಿದರು. ಏಕ ಗವಾಕ್ಷಿ ಸಮಿತಿಯಲ್ಲಿ ಮಂಡನೆಯಾದ ಪ್ರಸ್ತಾವನೆಗಳ ಬಗ್ಗೆ ಚರ್ಚಿಸಿ ಅನುಮೋದನೆ ನೀಡಿದರು.
ದಿ:08.09.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ MDRS ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜಿಗೆ ಅನಿರೀಕ್ಷಿತವಾಗಿ ರಾತ್ರಿ ಭೇಟಿ ನೀಡಿ , ವಿತರಣೆಯಾಗುತ್ತಿರುವ ಆಹಾರದ ಗುಣಮಟ್ಟ, ವೇಳಾ ಪಟ್ಟಿಯಂತೆ ಆಹಾರ ಪೂರೈಕೆ, ಶೌಚಾಲಯ, ಕುಡಿಯುವ ನೀರು ಹಾಗೂ ಊಟದ ಕೋಣೆ ಸ್ವಚ್ಚತೆ ಬಗ್ಗೆ ಪರಿಶೀಲನೆ ಮಾಡಿದರು.
ದಿ:08.09.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ MDRS ವಸತಿ ಶಾಲೆಗೆ ತಿಮ್ಮಲಾಪುರ ಗ್ರಾಮ ಹೊಸಪೇಟೆ ತಾಲೂಕು ವಸತಿ ಶಾಲೆಗೆ ರಾತ್ರಿ ಅನಿರೀಕ್ಷಿತವಾಗಿ ಭೇಟಿ ನೀಡಿ ಮಕ್ಕಳಿಗೆ ಪೂರೈಕೆಯಾಗುವ ಆಹಾರದ ಗುಣಮಟ್ಟ, ಮೂಲಭೂತ ಸೌಕರ್ಯಗಳ ಬಗ್ಗೆ ಹಾಗೂ ಶೈಕ್ಷಣಿಕ ಗುಣಪಟ್ಟದ ಬಗ್ಗೆ ಮಕ್ಕಳೊಂದಿಗೆ ಚರ್ಚಿಸ��ಾಯಿತು
ದಿನಾಂಕ:08.09.2025 ರಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರಿಂದ ಮಾಜಿ ದೇವದಾಸಿ ಮಹಿಳೆಯರಿಗೆ ಸ್ಥಗಿತಗೊಂಡಿದ್ದ ಪಿಂಚಣಿ ಮೊತ್ತವನ್ನು ಮುಂದುವರೆಸುವಂತೆ ಅಹವಾಲು ಸಲ್ಲಿಸಿದು ಈ ಹಿನ್ನಲೆಯಲ್ಲಿ ಕೂಡಲೇ ಮುಂದುವರೆಸುವ ಸಂಬಂಧ ನಿಯಮಾನುಸಾರ ಅ��ತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಿನಾಂಕ:08.09.2025 ರಂದು ಸನ್ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ, ರಾಜ್ಯದಲ್ಲಿ ಅತಿವೃಷ್ಠಿಯಿಂದಾದ ಹಾನಿಗಳು ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಚರ್ಚಿಸುವ ಸಂಬಂಧ ನಡೆದ ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಳು ಭಾಗವಹಿಸಿದರು.
ದಿ:06.09.25 ರಂದು ಮಾನ್ಯ ಜಿಲ್ಲಾಧಿಕಾರಿಗಳು, ಮಾಗಳ ಗ್ರಾಮದ PM Shri ಶಾಲೆಗೆ ಭೇಟಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಹಾಗೂ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದರು, ಸದರಿ ಶಾಲೆಯಲ್ಲಿ ಸುಮಾರು 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಶಾಲೆಗೆ ಅವಶ್ಯವಿರುವ ಕೊಠಡಿಗಳ ಬೇಡಿಕೆ ಹಾಗೂ ಇತರೆ ಬೇಡಿಕೆಗಳ ಪರಿಶೀಲಿಸಿದರು
ದಿನಾಂಕ:06.09.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು, ಹಡಗಲಿ ತಾಲೂಕು ಹಿರೇಹಡಗಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಹೊರ ರೋಗಿಗಳು ಹಾಗೂ 30ಕ್ಕೂ ಹೆಚ್ಚು ಒಳ ರೋಗಿಗಳು ಹಾಜರಿದ್ದುದನ್ನು ಕಂಡು ಹಾಜರಿದ್ದ ವೈದ್ಯಾಧಿಕಾರಿಗಳಿಂದ ಈ ಬಗ್ಗೆ ವಿವರ ಪಡೆದರು.
ದಿ:06.09.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು, ಹಡಗಲಿ ತಾಲೂಕು ಹಿರೇಹಡಗಲಿ ಹೋಬಳಿ ನಾಡಕಛೇರಿಗೆ ಭೇಟಿ ನೀಡಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು��ಳನ್ನು ಸ್ವೀಕರಿಸಿದರು. ನಾಡಕಛೇರಿಯಲ್ಲಿ ಸಾರ್ವಜನಿಕರಿಗೆ ಒದಗಿಸುವ ಸೇವೆಗಳ ಕುರಿತಾಗಿ ಹಾಗೂ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು
ನಾಳೆ ದಿನಾಂಕ:06.09.2025 ರ��ದು ಬೆಳಿಗ್ಗೆ 11.00 ಗಂಟೆಗೆ ಮಾನ್ಯ ಜಿಲ್ಲಾಧಿಕಾರಿಗಳು ಹಡಗಲಿ ತಾಲೂಕು ಹಿರೇಹಡಗಲಿ ನಾಡಕಛೇರಿಗೆ ಭೇಟಿ ನೀಡಲಿದ್ದು ಸಾರ್ವಜನಿಕರು ತಮ್ಮ ಯಾವುದಾದರು ಕುಂದುಕೊರತೆಗಳು ಇದ್ದಲ್ಲಿ ಮಾನ್ಯರಿಗೆ ಅಹವಾಲು ಸಲ್ಲಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.
ದಿನಾಂಕ:04.09.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು ಸೆಪ್ಟಂಬರ್ 17 ರಂದು ಅದ್ದೂರಿಯಾಗಿ ಆಚರಿಸಲ್ಪಡುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಂಬಂಧ ಪೂರ್ವ ಸಿಧ್ದತಾ ಸಭೆ ನಡೆಸಿದರು.
ದಿನಾಂಕ:04.09.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು, ಹೊಸಪೇಟೆ ತಾಲೂಕು ಗಾದಿಗನೂರು ಗ್ರಾಮದಲ್ಲಿ CSR [Corporate social responsibility] ಅನುದಾನದಡಿಯಲ್ಲಿ ಹೊಸದಾಗಿ ನಿರ್ಮಾಣವಾದ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡವನ್ನು ಪರಿಶೀಲನೆ ಮಾಡಿದರು,
ದಿನಾಂಕ:03.09.2025 ರಂದು ಸನ್ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ ಹಂಪಿ ಅಭಿವೃಧ್ದಿ ಪ್ರಾಧಿಕಾರ ವ್ಯಾಪ್ತಿಯ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ದಿ ಕುರಿತು ಕೈಗೊಂಡ ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಭಾಗವಹಿಸಿದರು.
ದಿನಾಂಕ:03.09.2025 ರಂದು ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃಧ್ದಿ ಆಯುಕ್ತರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಚರ್ಚಿಸುವ ಸಂಬಂಧ ನಡೆದ ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಭಾಗವಹಿಸಿದರು.