ಜಿಲ್ಲಾ ಕ್ರೀಡಾಂಗಣದ ವಿವಿಧ ಕಾಮಗಾರಿಗಳಿಗೆ ಡಿಸಿಎಂ ಕಾರಜೋಳ ಚಾಲನೆ
ಬಾಗಲಕೋಟೆ: ನವೆಂಬರ 01 (ಕರ್ನಾಟಕ ವಾರ್ತೆ) : ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಗೊಳ ನವೀಕರಣ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೂಮಿ ಪೂಜೆ ನೆರವೇರಿಸುವ ಮೂಲಕ ರವಿವಾರ ಚಾಲನೆ ನೀಡಿದರು.
ಬಾಗಲಕೋಟೆ: ನವೆಂಬರ 01 (ಕರ್ನಾಟಕ ವಾರ್ತೆ) : ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡಾಂಭೆಯ ಭಾವಚಿತ್ರಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿದರು. ನಂತರ ಧ್ವಜಾರೋಹಣ ನೆರವೇರಿಸಿದರು.
ಸಮೀಕ್ಷೆಯಲ್ಲಿ ಲೋಪಕಂಡಲ್ಲಿ ನಿರ್ದಾಕ್ಷಣ್ಯ ಕ್ರಮ
ಬಾಗಲಕೋಟೆ: ಜಿಲ್ಲೆಯಲ್ಲಿ ಇತ್ತೀಚೆಗೆ ಸಂಬಂವಿಸಿದ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ರೈತರ ಬೆಳೆ ಹಾಗೂ ಮನೆಗಳ ಸಮೀಕ್ಷೆಯ ವರದಿಯಲ್ಲಿ ಲೋಪ ಕಂಡುಬಂದಲ್ಲಿ ನಿರ್ದಾಕ್ಷಣ್ಯವಾಗಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದಾಗಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದರು.
ಬಸ್ಗಳಲ್ಲಿ ಕೋವಿಡ್-19 ಜಾಗೃತಿ
-------------------------
ಬಾಗಲಕೋಟೆ: ಅಕ್ಟೋಬರ 22 (ಕರ್ನಾಟಕ ವಾರ್ತೆ) : ಹುನಗುಂದ ತಾಲೂಕಿನ ಅಮೀನಗಡದ ಬಸ್ ನಿಲ್ದಾಣದಲ್ಲಿ ಬಸ್ನಲ್ಲಿರುವ ಪ್ರಯಾಣಿಕರಿಗೆ ಕೋವಿಡ್-19 ಸೋಂಕು ರೋಗದ ಬಗ್ಗೆ ಸೂಳೇಭಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎನ್.ನಾಯಕ ಜಾಗೃತಿ ಮೂಡಿಸಿದರು.
ಹಬ್ಬದ ದಿನಗಳಲ್ಲಿ ಕೋವಿಡ್ ಬಗ್ಗೆ ಎಚ್ಚರಿಕೆ ಕ್ರಮವಹಿಸಿ : ಸಚಿವ ಸುಧಾಕರ
ಬಾಗಲಕೋಟೆ: ಅಕ್ಟೋಬರ 19 ಅಕ್ಟೋಬರ ಮತ್ತು ನವೆಂಬರ ಮಾಹೆಯಲ್ಲಿ ಸಾಲು ಸಾಲು ಹಬ್ಬಗಳು ಇರುವುದರಿಂದ ಕೋವಿಡ್ ಬಗ್ಗೆ ನಾಗರಿಕರು ಎಚ್ಚರಿಕೆ ಕ್ರಮವಹಿಸುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ ಹೇಳಿದರು.
ಕೋವಿಡ್-19 ಜಾಗೃತಿ ಅಭಿಯಾನಕ್ಕೆ ನ್ಯಾ.ಕಲ್ಪನಾ ಕುಲಕರ್ಣಿ ಚಾಲನೆ
ಬಾಗಲಕೋಟೆ: ಮಹಾಮಾರಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಕೋವಿಡ್-19 ಜನಾಂದೋಲನ ಅಭಿಯಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಪ್ರವಾಹ ನಿರ್ವಹಣೆ : ಜಿಲ್ಲೆಯ 19 ಯುವ ಕಾರ್ಯಕರ್ತರು ಕಲಬುರ್ಗಿಗೆ
ಬಾಗಲಕೋಟೆ: ಅಕ್ಟೋಬರ 17 (ಕರ್ನಾಟಕ ವಾರ್ತೆ) : ಪ್ರವಾಹ ಮತ್ತು ಅತಿವೃಷ್ಠಿ ನಿರ್ವಹಣೆಗಾಗಿ ಬಾಗಲಕೋಟೆ ಜಿಲ್ಲೆಯ ನೆಹರು ಯುವ ಕೇಂದ್ರದ 19 ಯುವ ಕಾರ್ಯಕರ್ತರನ್ನು ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ ಕಲಬುರ್ಗಿಗೆ ಶುಕ್ರವಾರ ಕಳುಹಿಸಿಕೊಟ್ಟರು.
ಸಂಚಾರಿ ಮಾಂಸ ಮಾರಾಟ ವಾಹನ ವಿತರಣೆ
ಬಾಗಲಕೋಟೆ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ 2018-19ನೇ ಸಾಲಿನ ಸಂಚಾರಿ ಮಾಂಸ ಹಾಗೂ ಮಾಂಸದಿಂದ ತಯಾರಿಸಿದ ಖಾದ್ಯ ವಸ್ತುಗಳ ಮಾರಾಟ ಯೋಜನೆಯಡಿ ಫಲಾನುಭವಿಗೆ ಶಾಸಕ ವೀರಣ್ಣ ಚರಂತಿಮಠ ಅವರು ಸುಸಜ್ಜಿತ ಹಾಗೂ ಆಧುನಿಕ ವ್ಯವಸ್ಥೆ ಹೊಂದಿದ ಸಂಚಾರಿ ಮಾಂಸ ಮಾರಾಟ ವಾಹನವನ್ನು ವಿತರಿಸಿದರು
111 ಜನ ಗುಣಮುಖ, 76 ಹೊಸ ಪ್ರಕರಣ ದೃಡ
ಬಾಗಲಕೋಟೆ: ಜಿಲ್ಲೆಯಲ್ಲಿ 111 ಜನ ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 76 ಕೊರೊನಾ ಪ್ರಕರಣಗಳು ಹಾಗೂ ಒಂದು ಮರಣ ಪ್ರಕರಣ ಶುಕ್ರವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಕೋವಿಡ್-19 ಕುರಿತು ಜಾಗೃತಿ ಆಂದೋಲನ
ಬಾಗಲಕೋಟೆ: ಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಕೋವಿಡ್-19 ಜಾಗೃತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಕಲ್ಪನಾ ಕುಲಕರ್ಣಿ ತಿಳಿಸಿದರು.
ಬಾಗಲಕೋಟೆ: ಸೆಪ್ಟೆಂಬರ 07 (ಕರ್ನಾಟಕ ವಾರ್ತೆ) : ಬಾಗಲಕೋಟೆ ನಗರಕ್ಕೆ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವ ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಳಂಬ ನೀತಿ ಅನುಸರಿಸಿದ ಜೈನ್ ಇರಿಗೇಶನ್ ಸಿಸ್ಟಮ್ಸ್ ಲಿಮಿಟೆಡ್ ಗುತ್ತಿಗೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ದಿ ಸಚಿವರಾದ ಬೈರತಿ ಬಸವರಾಜ ತಿಳಿಸಿದರು.
ದೇವರಾಜು ಅರಸುರವರ 105ನೇ ಜನ್ಮ ದಿನ ಆಚರಣೆ
ಬಾಗಲಕೋಟೆ: ಆಗಸ್ಟ 20 (ಕರ್ನಾಟಕ ವಾರ್ತೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಹಾರ, ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸುರವರ 105ನೇ ಜನ್ಮ ದಿನಾಚರಣೆಯನ್ನು ಗುರುವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತದಿಂದ ಸದ್ಭಾವನಾ ದಿನ ಆಚರಣೆ
-------------------------------
ಬಾಗಲಕೋಟೆ: ಆಗಸ್ಟ 20 (ಕರ್ನಾಟಕ ವಾರ್ತೆ) : ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಮುಖ್ಯದ್ವಾರದಲ್ಲಿ ಗುರುವಾರ ಸದ್ಭಾವನಾ ದಿನಾಚರಣೆ ಆಚರಿಸಲಾಯಿತು.
ಪ್ರವಾಹ ಪರಿಸ್ಥಿತಿ ವಿಕ್ಷಿಸಿದ ಡಿಸಿಎಂ ಕಾರಜೋಳ
-----------------------------------------
ಬಾಗಲಕೋಟೆ: ಆಗಸ್ಟ 18 (ಕರ್ನಾಟಕ ವಾರ್ತೆ) : ಮುಧೋಳ ತಾಲೂಕಿನ ಚಿಚಖಂಡಿ ಗ್ರಾಮದ ಬಳಿ ಇರುವ ಸೇತುವೆಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದರು.
ಬಾಗಲಕೋಟೆ ಸಮಗ್ರ ಅಭಿವೃದ್ದಿಗೆ ಸಹಕರಿಸಿ : ಡಿಸಿಎಂ ಕಾರಜೋಳ
ಬಾಗಲಕೋಟೆ: ಆಗಸ್ಟ 17 (ಕರ್ನಾಟಕ ವಾರ್ತೆ) : ಬಾಗಲಕೋಟೆ ನಗರವನ್ನು ಮಾದರಿ ನಗರವನ್ನಾಗಿ ಅಭಿವೃದ್ದಿ ಪಡಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.
ರೈತರಿಂದಲೇ ಸ್ವಯಂ ಬೆಳೆ ಸಮೀಕ್ಷೆ : ಡಿಸಿ ರಾಜೇಂದ್ರ
ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಇಲಾಖೆಯು ಹೊರತಂದ ನೂತನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ರೈತರೇ ತಾವು ಬೆಳೆದಿರುವ ಬೆಳೆಯನ್ನು ನಮೂದಿಸಲು ಆಗಸ್ಟ 24 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ತಿಳಿಸಿದರು.